ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ‘ಚೇತನ’ ಕಾರ್ಯಕ್ರಮ

0

ಪುತ್ತೂರು :ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಆ.10ರಂದು ‘ಉದ್ಯಮಶೀಲತೆ’ ಎಂಬ ವಿಷಯದ ಬಗ್ಗೆ ‘ಚೇತನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಕೊಕೊಗುರು ಉದ್ಯಮದ ವ್ಯವಸ್ಥಾಪಕ ನಿರ್ದೇಶಕ ಕೇಶವರಾಮ್ ಬೋನಂತಾಯ ಅವರು ವಿದ್ಯಾರ್ಥಿಗಳಿಗೆ, ಉದ್ಯಮವನ್ನು ಕಟ್ಟುವ, ಬೆಳೆಸುವ ಮತ್ತು ಅದರ ಅಗತ್ಯತೆಗಳ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಸೂಕ್ತ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸಿಂಧು ವಿ. ಜಿ. ಉಪಸ್ಥಿತರಿದ್ದರು. ಶಾಲಾ ನಾಯಕಿ ಶ್ರೀಲಕ್ಷ್ಮಿ ಸ್ವಾಗತಿಸಿ, 1೦ನೇ ತರಗತಿ ವಿದ್ಯಾರ್ಥಿ ಸಾತ್ವಿಕ್ ನಾಯಕ್ ಧನ್ಯವಾದ ಸಮರ್ಪಿಸಿದರು. ಶಾಲೆಯ ಶಿಕ್ಷಕಿಯಾದ ರಂಜಿತಾ ಎಂ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here