ಕರಾಟೆ ಸ್ಪರ್ಧೆ: ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುಣಚ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಸ್ಪರ್ಧೆಯಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


10ನೇ ತರಗತಿ ವಿಧ್ಯಾರ್ಥಿಗಳಾದ ಜೀವೇಶ್ ವಿ.ಪೂಜಾರಿ, ಯಶಸ್ವಿ ನಾಯಕ್ ಹಾಗೂ 8ನೇ ತರಗತಿ ವರ್ಷ ಜೆ.ಶೆಟ್ಟಿ ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7ನೇ ತರಗತಿಯ ರಂಜಿತ್ ಎ.ಪ್ರಭು ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ. ಕರಾಟೆ ಶಿಕ್ಷಕ ವಿಟ್ಲ ನೀರ್ಕಜೆಯ ದಿನೇಶ್ ಕುಲಾಲ್ ತರಬೇತಿಯನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಶಾಲಾ ದೈಹಿಕ ಶಿಕ್ಷಕ ದಿನೇಶ್ ಎನ್. ಸಹಸಿಕ್ಷಕಿ ದೀಕ್ಷಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here