ಪೆರ್ನೆ: ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಮಂಜೂರಾತಿ ಪತ್ರ ವಿತರಣೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಪೆರ್ನೆ ವಲಯದ ಪೆರ್ಲಾಪು ’ಬಿ’ ಕಾರ್ಯಕ್ಷೇತ್ರದ ’ಅಮ್ಮ’ ಸಂಘದ ಸದಸ್ಯ ದಿನಕರರವರ ಪತ್ನಿ ಇಂದಿರಾರವರು ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.20,000/- ಮೊತ್ತದ ಕ್ರಿಟಿಕಲ್ ಇಲ್ನೆಸ್ ಫಂಡ್ ಸಹಾಯಧನದ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ವಿಚಕ್ಷಣಾಧಿಕಾರಿ ಕವಿತಾ ವಸಂತ್, ಕೃಷಿ ಮೇಲ್ವಿಚಾರಕ ಚಿದಾನಂದ್, ವಲಯ ಮೇಲ್ವಿಚಾರಕಿ ಶಾರದಾ, ಸೇವಾಪ್ರತಿನಿಧಿ ಭಾರತಿ, ಒಕ್ಕೂಟದ ಅಧ್ಯಕ್ಷೆ ಭಾರತಿ ಎಸ್ ರಾವ್, ನಿಕಟಪೂರ್ವ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿ, ನವಜೀವನ ಸಮಿತಿ ಸದಸ್ಯ ಕುಶಾಲಪ್ಪ ಸಪಲ್ಯ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ತಾರಾನಾಥ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here