ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ

0

ಕುಕ್ಕಾಜೆ: ಬಿಜೆಪಿ ಮಂಚಿ ಶಕ್ತಿ ಕೇಂದ್ರದ ವತಿಯಿಂದ ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.11ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಚಿ ಶಕ್ತಿ ಕೇಂದ್ರದ ಪ್ರಮುಖ ಮೋಹನ್ ದಾಸ್ ಶೆಟ್ಟಿ ಪುದ್ದೋಟು ವಹಿಸಿದ್ದರು. ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ದ. ಕ. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದಿನೇಶ್ ಆಮ್ಟೂರು, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಲಖಿತಾ ಶೆಟ್ಟಿ, ಬಂಟ್ವಾಳ ಮಂಡಲ ಕಾರ್ಯದರ್ಶಿ ಸುದರ್ಶನ್ ಬಜ, ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ವಿಜಯ ದಯಾನಂದ ನಾಯಕ್,, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೇಶವರಾವ್ ನೂಜಿಪ್ಪಾಡಿ ಭಾಗವಹಿಸಿದ್ದರು.

ಮೆಲ್ಕಾರ್ ಮಹಿಳಾ ಕಾಲೇಜಿನ ಉಪನ್ಯಾಸಕ ಎಮ್ ಡಿ ಮಾಯಿಲ ಆಟಿ ತಿಂಗಳ ಮಹತ್ವದ ಬಗ್ಗೆ ಮಾತನಾಡಿದರು. ರಮೇಶ್ ರಾವ್ ಪತ್ತುಮುಡಿ ಉವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಂಚಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಪುಷ್ಪಾ ಎಸ್ ಕಾಮತ್ ಸ್ವಾಗತಿಸಿದರು‌. ಕೇಶವರಾವ್ ನೂಜಿಪ್ಪಾಡಿ ಧನ್ಯವಾದ ಸಮರ್ಪಿಸಿದರು. ಬೂತ್ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಪಂಚಾಯತ್ ಸದಸ್ಯರು, ಕಾರ್ಯಕರ್ತರು ಮಹಿಳೆಯರು ಹಾಗೂ ಮಕ್ಕಳು ಪಾಲ್ಗೊಂಡು, ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ಸವಿಯನ್ನು ಎಲ್ಲರೂ ಸವಿದರು.

LEAVE A REPLY

Please enter your comment!
Please enter your name here