ರಾಮಕುಂಜೇಶ್ವರ ವಸತಿ ನಿಲಯದಲ್ಲಿ ’ಸಂಸ್ಕಾರ ಕುಂಜ’ಉಪನ್ಯಾಸ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಸತಿ ನಿಲಯದಲ್ಲಿ ’ಸಂಸ್ಕಾರ ಕುಂಜ’ ಮಾಲಿಕೆ -2 ವಿಶೇಷ ಉಪನ್ಯಾಸ ಕಾರ್ಯಕ್ರಮ ಆ.11ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿಟ್ಟೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಅಕ್ಷಯ ಗೋಖಲೆ ಅವರು, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು.ಶ್ರದ್ಧೆ, ಆತ್ಮವಿಶ್ವಾಸದೊಂದಿಗೆ ಪ್ರಯತ್ನಶೀಲರಾದಾಗ ಯಶಸ್ಸನ್ನು ಪಡೆಯಲು ಸಾಧ್ಯ. ಗುರುಗಳ, ತಂದೆ ತಾಯಿಯರ ಮಾರ್ಗದರ್ಶನದೊಂದಿಗೆ ಕಾರ್ಯ ಪ್ರವೃತ್ತರಾದಾಗ ಸಂಸ್ಕಾರಯುತ ಜೀವನ ನಡೆಸಬಹುದು ಎಂದು ಉಪನ್ಯಾಸಗೈದರು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಮಾತನಾಡಿ, ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಿಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಪ್ರಜೆಗಳಾಗಬೇಕೆಂದು ಹೇಳಿದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ನಿಲಯ ಪಾಲಕರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಶಿಕ್ಷಕ ಕಿಶೋರ್ ಕುಮಾರ್ ಬಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here