ಕೊರಗಪ್ಪ ಗೌಡರಿಗೆ ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿ

0

ನಿಡ್ಪಳ್ಳಿ; ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕೃತಕ ಗರ್ಭಧಾರಣಾ ಕಾರ್ಯಕರ್ತ ಕೊರಗಪ್ಪ ಗೌಡ ಇವರು 2023-24 ನೇ ಸಾಲಿನ ಪುತ್ತೂರು ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿ ಪಡೆದುಕೊಂಡಿದ್ದಾರೆ.

 ಇತ್ತೀಚೆಗೆ ಪುತ್ತೂರು ದರ್ಶನ್ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಾರ್ಯದರ್ಶಿಗಳ ಸಮಾಲೋಚನಾ ಸಭೆಯಲ್ಲಿ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರು ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here