ವಾಲಿಬಾಲ್ ಪಂದ್ಯಾಟ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಉಪ್ಪಿನಂಗಡಿ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇವರ ವತಿಯಿಂದ ಆ.12ರಂದು ರಾಮಕುಂಜ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜದಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿಗಳಾದ ಆಯತ್ತುಲ್ಲಾ ಸಲೀಂ, ಜಿತೇಶ್ ಎಸ್. ವಿ, 6ನೇ ತರಗತಿ ವಿದ್ಯಾರ್ಥಿಗಳಾದ ಅದ್ವೈತ್ ಎ.ಕೆ, ವಂಶಿ, ಸಹನ್ ಕೆ.ಎಸ್, ಪ್ರಣಿತ್ ರವಿ, ಗವಿನ್ ರೇಶಿಮೆ, ವಂಶ್ ವೈ ಶೆಟ್ಟಿ, ಅನ್ಶುಲ್ ಶೆಟ್ಟಿ, 7ನೇ ತರಗತಿ ವಿದ್ಯಾರ್ಥಿಗಳಾದ ಶಿಶಿರ್ ಜೆ ಸಾಲಿಯಾನ್, ಕೆ. ಅತುಲ್ ನಾಯಕ್, ವಚನ್ ಕನ್ಯಾನ, ನಿಶಾದ್ ಸುಲೈಮಾನ್ ಕೆ, ಮೊಹಮ್ಮದ್ ಇರಾಝ್ ಹಾಗೂ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ಎಂ.ಎಸ್ ಅನುಶ್ರೀ, ಎಂ.ಧನ್ವಿ ಶೆಟ್ಟಿ, ಸ್ತುತಿ ಶೆಟ್ಟಿ, 7ನೇ ತರಗತಿಯ ವಿದ್ಯಾರ್ಥಿಗಳಾದ ತೃಷಾ ಕೆ, ಹಂಸಿನಿ .ಜಿ , ಶ್ರೀಯ ಎಸ್ ಶೆಟ್ಟಿ, ಶ್ರಾವಣ್ಯ ಎಸ್, 6ನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ ಸಿ.ಎಚ್, ಆರುಶಿ ವಿ. ಆರ್, ಅನುಷ್ಕ ಜೆ ವಿದ್ಯಾರ್ಥಿಗಳ ತಂಡವು ವಿಜೇತರಾಗಿ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಗೋಪಿನಾಥ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿಯರಾದ ವಿದ್ಯಾ, ಶ್ರೀರಂಜಿನಿ ತರಬೇತಿ ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here