ಇಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ

0

ಪುತ್ತೂರು: ವಿಶ್ವಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಅಖಂಡ ಭಾರತದ ಸಂಕಲ್ಪವನ್ನು ಮಾಡಿಕೊಂಡು ಬೃಹತ್ ಪಂಜಿನ ಮೆರವಣಿಗೆ ಮತ್ತು ಭಾರತ ಮಾತಾ ಪೂಜನಾ ಕಾರ್ಯಕ್ರಮ ಆ.14ರಂದು ಸಂಜೆ ಪುತ್ತೂರಿನಲ್ಲಿ ನಡೆಯಲಿದೆ.


ಸಂಜೆ ಗಂಟೆ 7ಕ್ಕೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಿಂದ ಪಂಜಿನ ಮೆರವಣಿಗೆ ಹೊರಟು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಸಮಾವೇಶಗೊಳ್ಳಲಿದೆ. ಹಿಂದೂ ಜಾಗರಣಾ ವೇದಿಕೆಯ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಅವರು ಮೆರವಣಿಗೆ ಉದ್ಘಾಟಿಸಲಿದ್ದಾರೆ. ರಾತ್ರಿ ಗಂಟೆ 8ಕ್ಕೆ ಕಿಲ್ಲೆ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದೈವ ನರ್ತಕ ಮತ್ತು ಸಿವಿಲ್ ಇಂಜಿನಿಯರ್ ರವೀಶ್ ಪಡುಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನ್ಯಾಯವಾಗಿ ಮಹೇಶ್ ಕಜೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here