ಸ್ವಾತಂತ್ರ್ಯೋತ್ಸವ ಸಂಭ್ರಮ, ಕುಂಬ್ರ ವರ್ತಕರ ಸಂಘದಿಂದ ಅಂಗನವಾಡಿ, ಶಾಲೆಗಳಿಗೆ ಸಿಹಿತಿಂಡಿ ವಿತರಣೆ

0

ಪುತ್ತೂರು: 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಕುಂಬ್ರ ವರ್ತಕರ ಸಂಘದಿಂದ ಅಂಗನವಾಡಿ ಹಾಗೂ ಶಾಲೆಗಳಿಗೆ ಸಿಹಿತಿಂಡಿ ಹಂಚಲಾಯಿತು. ಪ್ರತಿ ವರ್ಷದಂತೆ ಈ ಬಾರಿಗೆ ಗ್ರಾಮದ 5 ಅಂಗನವಾಡಿ ಕೇಂದ್ರಗಳಾದ ಸಾರೆಪುಣಿ, ಶೇಖಮಲೆ, ಕುಂಬ್ರ, ಕೊೖಲತ್ತಡ್ಕ ಮತ್ತು ಪರ್ಪುಂಜ ಅಂಗನವಾಡಿ ಕೇಂದ್ರಗಳಿಗೆ ಹಾಗೂ 3 ಶಾಲೆಗಳಿಗೆ ಚಾಕೊಲೇಟ್ ಹಂಚಲಾಯಿತು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ದಿವಾಕರ ಶೆಟ್ಟಿ, ಮೆಲ್ವಿನ್ ಮೊಂತೆರೋ, ಉಪಾಧ್ಯಕ್ಷ ಉದಯ ಆಚಾರ್ಯ ಕೃಷ್ಣನಗರ, ಪ್ರಧಾನ ಕಾರ್ಯದರ್ಶಿ ಭವ್ಯ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here