ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನಿಂದ ಪ್ರಶಸ್ತಿ

0

ವಿಟ್ಲ: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ 2023-24ರ ಆರ್ಥಿಕ ವರ್ಷದಲ್ಲಿ ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಲಭಿಸಿದೆ.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ರವರು ಮಂಗಳೂರಿನಲ್ಲಿ ನಡೆದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾ‌ನ ಮಾಡಿದರು.
ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿರವರು ಪ್ರಶಸ್ತಿಯನ್ನು ಪಡೆದುಕೊಂಡರು. ಸಂಘದ ಸದಸ್ಯರು ಕಳೆದ 10 ವರ್ಷಗಳಿಂದ 100% ಸಾಲ ಮರುಪಾವತಿ ಮಾಡಿ ಪ್ರತಿ ವರ್ಷ ಪ್ರಶಸ್ತಿ ಪಡೆಯಲು ಕಾರಣರಾಗಿದ್ದಾರೆ. ಸಂಘವು ಆಡಿಟ್ ವರ್ಗೀಕರಣದಲ್ಲಿ 19 ವರ್ಷಗಳಿಂದ ಸತತವಾಗಿ “ಎ” ಶ್ರೇಣಿಯಲ್ಲಿದೆ.
ಈ ಸಂದರ್ಭದಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಮೊದಲಾದವರು ಉಸ್ಥಿತರಿದ್ದರು.

LEAVE A REPLY

Please enter your comment!
Please enter your name here