ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗಣನೀಯ ಸಾಧನೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರೋತ್ಸಾಹ ಪ್ರಶಸ್ತಿ ಗೌರವ ಪ್ರದಾನ

0

ಪುತ್ತೂರು: 2023-24ನೇ ಆರ್ಥಿಕ ವರ್ಷಕ್ಕೆ ಸಾಲ ವಸೂಲಾತಿ ಸೇರಿದಂತೆ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗಣನೀಯ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹಕ ಪ್ರಶಸ್ತಿ ಗೌರವ ಪ್ರದಾನ ಆ.14ರಂದು ನಡೆಯಿತು.
ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್, ಲೆಕ್ಕಿಗರಾದ ವೀಣಾ, ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ನಿರ್ದೇಶಕರುಗಳಾದ ಸುಕುಮಾರ, ಸೂರಪ್ಪ, ಸಂತೋಷ್ ರೈ ಕೈಕಾರ, ರಾಮಕೃಷ್ಣ, ಉಷಾ ನಾರಾಯಣ, ವಾರಿಜಾಕ್ಷಿ ಹಾಗೂ ರಾಜೇಶ್ ರೈ ಪರ್ಪುಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here