ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಗೌರವ ಪ್ರಶಸ್ತಿ

0

ಪುತ್ತೂರು: 2023-24ನೇ ಆರ್ಥಿಕ ವರ್ಷಕ್ಕೆ ಸಾಲ ವಸೂಲಾತಿ ಸೇರಿದಂತೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗಣನೀಯ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹಕ ಪ್ರಶಸ್ತಿ ಗೌರವ ಪ್ರದಾನ ಆ.14ರಂದು ನಡೆಯಿತು. ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿಜಾ ಕೆ, ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ, ನಿರ್ದೇಶಕರುಗಳಾದ ತೀರ್ಥಾನಂದ ದುಗ್ಗಳ, ವಸಂತ ಕುಮಾರ್ ರೈ ಕೆ, ಸತೀಶ್ ಪಾಂಬಾರು, ಶಿವರಾಮ, ಶ್ರೀಧರ ಗೌಡ ಅಂಗಡಿಹಿತ್ಲು, ಅಣ್ಣಪ್ಪ ನಾಯ್ಕ, ಗುರುವಪ್ಪ, ವಿಶಾಲಕ್ಷಿ ಉಪಸ್ಥಿತರಿದ್ದರು.‌

LEAVE A REPLY

Please enter your comment!
Please enter your name here