ಬೆಳಂದೂರು ಪಳ್ಳತ್ತಾರು ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ತಖ್ವಿಯತುಲ್ ಇಸ್ಲಾಂ ಮದ್ರಸ ಪಳ್ಳತ್ತಾರು ಬೆಳಂದೂರು ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಜಮಾಅತ್ ಅಧ್ಯಕ್ಷರಾದ ಉಪ್ಪಂಂಞಿ ಹಾಜಿ ಬನಾರಿ ಧ್ವಜಾರೋಹಣಗೈದರು.ಜಮಾಅತ್ ಖತೀಬರಾದ ಮುಹಮ್ಮದ್ ಮುಸ್ತಾಕ್ ಕಾಮಿಲ್ ಸಖಾಫಿ ಸಂದೇಶ ಭಾಷಣ ಮಾಡಿದರು.ಮದರಸ ಅಧ್ಯಾಪಕರಾದ ಜಲೀಲ್ ಮುಈನಿ,ಶಿಹಾಬ್ ಫಾಳಿಲಿ,ಹಸನ್ ಝುಹ್ರಿ ಶುಭಹಾರೈಸಿದರು.ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ಜಮಾಅತಿನ ಪದಾಧಿಕಾರಿಗಳು,ಕುತುಬಿಯತ್ ಕಮಿಟಿ,ಕರ್ನಾಟಕ ಮುಸ್ಲಿಂ ಜಮಾಅತ್,ಎಸ್ ವೈ ಎಸ್,ಎಸ್ ಎಸ್ ಎಫ್,ಗಲ್ಫ್ ಸಮಿತಿಯ ನೇತಾರರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here