ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನಿಂದ ಪ್ರಶಸ್ತಿ

0

ವಿಟ್ಲ; ಇಡ್ಕಿದು ಸೇವಾ ಸಹಕಾರಿ ಸಂಘವು 2023-24ರ ಆರ್ಥಿಕ ವರ್ಷದಲ್ಲಿ ನೂರು ಕೋಟಿಗಿಂತ ಅಧಿಕ ಠೇವಣಾತಿ ಸಂಗ್ರಹಣೆಗೆ ಹಾಗೂ ಗಣನೀಯವಾಗಿ ಅಭಿವೃದ್ಧಿ ಹೊಂದಿದ ಸಾಧನೆಗಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರಶಸ್ತಿ ಲಭಿಸಿದೆ. ಕಳೆದ ಹದಿನಾರು ವರುಷಗಳಿಂದ ನಿರಂತರವಾಗಿ ಸಂಘಕ್ಕೆ ಪ್ರಶಸ್ತಿ ಲಭಿಸುತ್ತಾ ಬಂದಿದೆ.

ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಬೀಡಿನಜಲು,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲೊಟ್ಟು, ಎಸ್.ಬಿ. ಜಯರಾಮ ರೈ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here