ನೆಟ್ಟಣಿಗೆ ಮೂಡ್ನೂರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು:ನೆಟ್ಟಣಿಗೆ ಮೂಡ್ನೂರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು. 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಕಾರ್ಯಾಧ್ಯಕ್ಷ ಶ್ರೀರಾಮ್ ಪಕ್ಕಳ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಮಹಾಬಲ ರೈ ಕರ್ನೂರು, ಅಬ್ದುಲ್ ಖಾದರ್ ಸುರುಳಿ ಮೂಲೆ, ಅಶ್ರಫ್ ಕತಾರ್, ಮಹಮ್ಮದ್ ಪಳ್ಳತ್ತೂರು, ಇಬ್ರಾಹಿಂ ಕರ್ನೂರು, ಮೂಸ ಓಣಿಯಡ್ಕ,ಶಿಕ್ಷಕರಾದ ಶ್ರೀಪುರುಷೋತ್ತಮ, ಇಂದಿರಾ ಕಚೇರಿ ಗುಮಾಸ್ತರಾದ ಹೇಮಾವತಿ. ದಮಯಂತಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯಸ್ಥ ಪ್ರೇಮ ಕುಮಾರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೇವಿ ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here