ಅರಿಯಡ್ಕ: ಕೊಂಬರಡ್ಕದಲ್ಲಿ ಸ್ವಸಹಾಯ ಸಂಘದ ಸದಸ್ಯರಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನವೋದಯ ಸ್ವಸಹಾಯ ಸಂಘ ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಅರಿಯಡ್ಕ ಗ್ರಾಮದ ಕೊಂಬರಡ್ಕದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅರಿಯಡ್ಕ ಗ್ರಾಪಂ ಸದಸ್ಯ ರಾಜೇಶ್ ಮಣಿಯಾಣಿ ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದರು.

ಮಾಜಿ ಸೈನಿಕ ಚಂದ್ರಶೇಖರ ರೈ ಪಯಂದೂರು ಸಭಾಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ರಜನಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾರಾಯಣ ಆಚಾರ್ಯರವರು ಈ ಸಂದರ್ಭದಲ್ಲಿ ಸಂಘಕ್ಕೆ ದೇವರ ಪೀಠ, ಮೇಜು ಅನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಅರಿಯಡ್ಕಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್, ಪ್ರಗತಿಪರ ಕೃಷಿಕ ಮೋನಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಲತಾ ಶಿವಣ್ಣ ಸ್ವಾಗತಿಸಿ, ಕವಿತಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು. ಭಾಗೀರಥಿ ವಂದಿಸಿದರು. ಧರ್ಮಸ್ಥಳ ಸಂಘದ ಮಂದಾರ ಕೊಂಬರಡ್ಕ, ಶ್ರೀ ಶಾರದಾ ಕೊಂಬರಡ್ಕ ಹಾಗೂ ನವೋದಯದ ಧನಲಕ್ಷ್ಮೀ ಕೊಂಬರಡ್ಕ ಮತ್ತು ಶ್ರೀಲಕ್ಷ್ಮೀ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here