ಅಮರಗಿರಿ ಶ್ರೀ ಭಾರತಿ ಅಮರ ಜ್ಯೋತಿ ಮಂದಿರದಲ್ಲಿ 78ನೇ ಸ್ವಾತಂತ್ರ್ಯೋತ್ಸವ

0

ಈಶ್ವರಮಂಗಲ:ಅಮರಗಿರಿ ಶ್ರೀ ಭಾರತಿ ಅಮರ ಜ್ಯೋತಿ ಮಂದಿರದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು.

ಮುಖ್ಯ ಅತಿಥಿ ಪಡುಮಲೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ಇವರು ಯೋಧನ ಹಸ್ತಕ್ಕೆ ಧ್ವಜವನ್ನು ಹಾಕಿ ಗೌರವವನ್ನು ಸಲ್ಲಿಸಿ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮಾತುಗಳಾಡಿದರು.

ಆಗಮಿಸಿದ ಅತಿಥಿಗಳು ಭಾರತಮಾತೆಗೆ ಹಾಗೂ ಯೋಧನ ಸ್ಮಾರಕಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಚುತ್ತ ಮೂಡೆತ್ತಾಯ ವಹಿಸಿದರು. ವೇದಿಕೆಯಲ್ಲಿ ಆನಂದ ರೈ ಸಾಂತ್ಯ, ನಾಗಪ್ಪ ಗೌಡ ಬೊಮ್ಮೆಟ್ಟಿ ಉಪಸ್ಥಿತರಿದ್ದರು. ಕ್ಷೇತ್ರದ ಧರ್ಮದರ್ಶಿ ಶಿವರಾಂ ಪಿ ಸ್ವಾಗತಿಸಿ, ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗಜಾನನ ಶಾಲೆಯ ಮಕ್ಕಳು ಹಾಗೂ ದೇಶಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here