ಅರಿಯಡ್ಕ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ

0

ಅರಿಯಡ್ಕ: ಅರಿಯಡ್ಕ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೌಡಿಚ್ಚಾರು ಪಲ್ಲ-ಮದಕ (ಪುಷ್ಕರಿಣಿ) ಕೆರೆ ವಠಾರದಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜ್ರಂಭಣೆಯಿಂದ ನೆರವೇರಿತು.

ಮಾಜಿ ಸೈನಿಕ ಅಮ್ಮಣ್ಣ ರೈ ಡಿ ಪಾಪೆಮಜಲು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆ ಮಜಲು ಇದರ ಮುಖ್ಯೋಪಾಧ್ಯಾಯರಾದ ಶಶಿಕಲಾ ಎಂ, ಮತ್ತು ಪಂಚಾಯತ್ ಸದಸ್ಯರು,ಪುಷ್ಕರಿಣಿ ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆ ಮಜಲು ಇದರ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ವಾಹನ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.


ಆಕರ್ಷಕ ಜಾಥಾ….
.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆಮಜಲು ಇಲ್ಲಿಯ ವಿದ್ಯಾರ್ಥಿಗಳು ಶಾಲೆಯಿಂದ ಕೌಡಿಚ್ಚಾರು ಪುಷ್ಕರಿಣಿ ಕೆರೆಯ ತನಕ ಆಕರ್ಷಕ ಪಥ ಸಂಚಲನ ಮಾಡಿದರು.ಕೌಡಿಚ್ಚಾರು ಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ವರ್ತಕರಿಂದ , ಹಾಗೂ ಸಾರ್ವಜನಿಕರಿಂದ ಸಿಹಿ ತಿಂಡಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ಶಿವರಾಮ ಮೂಲ್ಯ ಸ್ವಾಗತಿಸಿ ಸಿಬ್ಬಂದಿ ಪ್ರಭಾಕರ ವಂದಿಸಿದರು.

LEAVE A REPLY

Please enter your comment!
Please enter your name here