ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರ್ ಆಯ್ಕೆ

0

ಪುತ್ತೂರು: ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ದಯಾನಂದ ಶಟ್ಟಿ ಉಜಿರೆಮಾರ್ ಅವರನ್ನು ಇದೀಗ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.


ದಯಾನಂದ ಶೆಟ್ಟಿ ಉಜಿರೆಮಾರ್‌ರವರು ವಿಟ್ಲ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದು ಪ್ರಸ್ತುತ ನಿರ್ದೇಶಕರಾಗಿದ್ದಾರೆ.ಕಳೆದ ಹದಿನೈದು ವರುಷಗಳಿಂದ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸಿರುವ ಅವರು ಚಂದಳಿಕೆ ಯುವಕೇಸರಿ ಫ್ರ‍್ರೆಂಡ್ಸ್ ಕ್ಲಬ್, ಶ್ರೀರಾಮ ಫ್ರೆಂಡ್ಸ್ ಕ್ಲಬ್ ವಿಟ್ಲ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ಯುವಕ ಮಂಡಲದ ಗೌರವಾಧ್ಯಕ್ಷರಾಗಿದ್ದಾರೆ.ಕಳೆದ ಹಲವಾರು ವರುಷಗಳಿಂದ ಬಜರಂಗದಳದ ಸಕ್ರಿಯ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದರು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿ ಸುದೀರ್ಘ ಸೇವೆ ಸಲ್ಲಿಸಿರುವ ದಯಾನಂದ ಶೆಟ್ಟಿ ಉಜಿರೆಮಾರ್‌ರವರು ಕಳೆದ ಹಲವಾರು ವರುಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು ಮಾತ್ರವಲ್ಲದೆ, ಹಲವಾರು ಧಾರ್ಮಿಕ ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here