ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾರ್ ಮಾರ್ತ ನೇಮಕ

0

ಪುತ್ತೂರು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಇಳಂತಾಜೆಯ ಪ್ರಸನ್ನ ಕುಮಾರ್ ಮಾರ್ತ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಘೋಷಣೆ ಮಾಡಿದ್ದಾರೆ.


ವಿದ್ಯಾರ್ಥಿ ಜೀವನದಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿದ್ದು, 1991-92ರಲ್ಲಿ ಎಬಿವಿಪಿಯಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ, ಗ್ರಾ.ಪಂ ಚುನಾವಣೆಯಲ್ಲಿ ಉಸ್ತುವಾರಿ, ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಎರಡು ಅವಧಿ ಪೂರೈಸಿ, ಜಿ.ಪಂ.ಚುನಾವಣೆಯಲ್ಲೂ ಉಸ್ತುವಾರಿ ವಹಿಸಿದ್ದ ಇವರು ಹೊಸದಿಗಂತ ಪತ್ರಿಕೆಯಲ್ಲೂ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇವರು ನಿವೃತ್ತ ವಲಯ ಅರಣ್ಯಾಧಿಕಾರಿ ಇಳಂತಾಜೆ ದಿ.ಬಾಲಕೃಷ್ಣ ಮಾರ್ತ-ಬಳ್ಳಮಜಲು ಗುತ್ತು ಬೋಳೋಡಿ ವೇದಾವತಿ ಮಾರ್ತ ಇವರ ಪುತ್ರ. ಇವರು ಪತ್ನಿ ಸವಿತಾ ಮಾರ್ತ, ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಪುತ್ರ ಪ್ರಣಮ್ ಮಾರ್ತ ಅವರೊಂದಿಗೆ ಸುಖೀ ಜೀವನ ನಡೆಸುತ್ತಿದ್ದಾರೆ.ಇವರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ತಾಲೂಕು ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here