ಇರ್ದೆ-ಬೆಟ್ಟಂಪಾಡಿ ಪ್ರಾ.ಕೃ.ಪ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದೇಶದ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಹಕಾರಿ ಸಂಘ ಅಧ್ಯಕ್ಷ ರಂಗನಾಥ ರೈ ಕೆ.ಯಸ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಸೇನಾನಿಗಳ ಸೇವೆ ಹೋರಾಟ ಸ್ಮರಿಸಿದರು. ಸಂಘದ ನಿರ್ದೇಶಕರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು, ಸಂಘದ ಉಪಾಧ್ಯಕ್ಷ ಗಿರೀಶ್ವರ ಭಟ್, ನಿರ್ದೇಶಕರಾದ ಕರುಣಾಕರ ಶೆಟ್ಟಿ ಕೆ, ನಾಗೇಶ, ಹರೀಶ ಗೌಡ, ಸದಾಶಿವ ರೈ ಗುಮ್ಮಟೆಗದ್ದೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಂಭು ಭಟ್ಟ ಮತ್ತು ಸಂಘದ ಸಿಬಂದಿಗಳು, ಸದಸ್ಯರು, ಗ್ರಾಹಕರು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಮಯ್ಯ ರೈ ಪಿ ಸ್ವಾಗತಿಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಲಿಂಗಪ್ಪ ಗೌಡ ಬಿ. ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಗುಮಾಸ್ತ ಸುವರ್ಣ ಆರ್.ಬಿ ವಂದಿಸಿದರು.

LEAVE A REPLY

Please enter your comment!
Please enter your name here