ಆರ್ಯಾಪು ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್‌ನಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಅಧ್ಯಕ್ಷ ಗೀತಾ ಧ್ವಜಾರೋಹಣ ನೆರವೇರಿಸಿದರು.

ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾಚಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಲಾಯಿತು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಂಚಾಯತ್ ವ್ಯಾಪ್ತಿಯ ಕುರಿಯ, ಮಾವಿನಕಟ್ಟೆ, ಇಡಬೆಟ್ಟು, ಹಂಟ್ಯಾರು ಹಾಗೂ ಕಂಜೂರುಪಂಜ ಶಾಲೆಗಳ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಂಥಾಲಯದ ಅರಿವು ಕೇಂದ್ರದ ನೂತನ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು. ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಿಗೆ ಪಂಚಾಯತ್‌ನಿಂದ ಸಿಹಿ ತಿಂಡಿ ವಿತರಿಸಲಾಯಿತು. ಪಂಚಾಯತ್ ಸದಸ್ಯರು ಹಾಗೂ ಸಿಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಿಡಿಓ ನಾಗೇಶ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here