ಸಾಮೆತ್ತಡ್ಕ ಹಿ. ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ದ. ಕ. ಜಿ. ಪಂ. ಹಿ. ಪ್ರಾ ಶಾಲೆ ಸಾಮೆತ್ತಡ್ಕ 78ನೇ ವರ್ಷದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋಪಾಲ ಕೃಷ್ಣ ಭಟ್ ನೆರವೇರಿಸಿದರು.ಧ್ವಜಾರೋಹಣ ಕಾರ್ಯಕ್ರಮದಲ್ಲಿ ಟ್ರಸ್ಟ್ ಪ್ರತಿನಿಧಿ ವೆಂಕಟ್ ರಾಜ್, ಟ್ರಸ್ಟ್ ಪ್ರತಿನಿಧಿ ಹಾಗೂ ಡ್ಯಾಶ್ ಮಾರ್ಕೆಟಿಂಗ್ ಮಾಲಕಿ ನಳಿನಿ ಪಿ ಶೆಟ್ಟಿ, ವಿದ್ಯಾಭಿಮಾನಿ ದಿನೇಶ್ ಕಾಮತ್, ಟ್ರಸ್ಟ್ ಪ್ರತಿನಿಧಿ, ಶ್ರೀ ಮಹಾಲಿಂಗೇಶ್ವರ ಭಟ್,ದಿನೇಶ್ ಪ್ರಸನ್ನ, ತವೀಝ್, SDMC ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು,SDMC ನಿಕಟ ಪೂರ್ವ ಅಧ್ಯಕ್ಷರು, ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಪೋಷಕರು, ಹಿರಿಯ ವಿದ್ಯಾರ್ಥಿಗಳು,ಯುವಕ ಮಂಡಲ ಪ್ರತಿನಿಧಿಗಳು, ಯುವಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ನಮ್ಮ ವಾರ್ಡ್ ಸದಸ್ಯ ಮನೋಹರ್, ಬಾಲಚಂದ್ರ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಗುರು ಮರಿಯಾ ಅಶ್ರಫ್ ಸ್ವಾಗತಿಸಿ, ಅತಿಥಿ ಶಿಕ್ಷಕಿ ಚಿತ್ರಲೇಖ ಕಾರ್ಯಕ್ರಮ ನಿರೂಪಿಸಿ, ಲಿಖಿತ ವಂದಿಸಿದರು. ಟ್ರಸ್ಟ್ ಪ್ರತಿನಿಧಿ ಇಂದಿವರ್ ಭಟ್, ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಝ್ ಹಾಗೂ ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.ಶಾಲಾಭಿಮಾನಿಗಳು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳಿಸಲಾಯಿತು.

LEAVE A REPLY

Please enter your comment!
Please enter your name here