ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನಿಂದ ಪ್ರಶಸ್ತಿ

0

ವಿಟ್ಲ: ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ ಲಭಿಸಿದೆ.

ಮಂಗಳೂರಿನಲ್ಲಿ ನಡೆದ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ನರ್ಸಪ್ಪ ಪೂಜಾರಿ ಯನ್, ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಭುವನೇಶ್ವರ ಬಿ. ರವರಿಗೆ
ಪ್ರಶಸ್ತಿ ಪ್ರಧಾನ ಮಾಡಿದರು. ಈವರೆಗೆ ಸಂಘವು ಎಂಟು ಭಾರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರಾದ ರಮೇಶ್ ಹೆಚ್. ಎನ್., ಸಂಘದ ಉಪಾಧ್ಯಕ್ಷರಾದ ಮಹಾಬಲೇಶ್ವರ ಭಟ್ ಎ, ನಿರ್ದೇಶಕರುಗಳಾದ ಉದಯಕುಮಾರ್ ಯನ್, ಸದಾನಂದ ಗೌಡ ಸೇರಾಜೆ, ಗೌರಿ ಯಸ್, ಯನ್, ಭಟ್, ಶಿವಪ್ಪ ನಾಯ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here