ಬೊಳಿಯಾರು: ಕಾಡಾನೆ ದಾಳಿ-ಕೆಎಸ್‌ಆರ್‌ಟಿಸಿ ಬಸ್ಸು, ದ್ವಿಚಕ್ರ ವಾಹನ ಜಖಂ

0

ನೆಲ್ಯಾಡಿ: ಕಾಡಾನೆಯೊಂದು ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ದ್ವಿಚಕ್ರ ವಾಹನವೊಂದು ಜಖಂಗೊಳಿಸಿರುವ ಘಟನೆ ಕೊಕ್ಕಡ-ಧರ್ಮಸ್ಥಳ ರಸ್ತೆಯ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಆ.15ರಂದು ಸಂಭವಿಸಿದೆ.


ಬೊಳಿಯಾರು ಸಮೀಪ ರಸ್ತೆ ದಾಟುತ್ತಿದ್ದ ಕಾಡಾನೆ ರಸ್ತೆಯಲ್ಲಿಯೇ ನಿಂತಿದ್ದು ಇದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಬಂದ ಕೆ.ಎಸ್.ಆರ.ಟಿ.ಸಿ ಬಸ್ಸನ್ನು ಅಡ್ಡಗಟ್ಟಿದ ಕಾಡಾನೆ ಬಸ್ಸಿನ ಮುಂಭಾಗಕ್ಕೆ ತಿವಿದಿದ್ದು ಇದರಿಂದ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇದೇ ವೇಳೆ ಈ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಬಂದಿದ್ದು ಅದರ ಸವಾರ ದ್ವಿಚಕ್ರವನ್ನು ಅಲ್ಲೇ ಬಿಟ್ಟು ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ದ್ವಿಚಕ್ರ ವಾಹನವನ್ನು ಆನೆ ಜಖಂಗೊಳಿಸಿದೆ. ಇಲ್ಲಿನ ಬೊಳಿಯಾರು ಹಾಗೂ ಮುಳಿಕಾರು ಪರಿಸರದಲ್ಲಿ ಎರಡು ದಿನಗಳಿಂದ ಕಾಡಾನೆಗಳ ಹಿಂಡು ತಿರುಗಾಡುತ್ತಿದ್ದು ಕೃಷಿಕರಿಗೆ ತೊಂದರೆಯುಂಟುಮಾಡುತ್ತಿದೆ. ಇದೀಗ ಹೆದ್ದಾರಿಗೆ ಕಾಡಾನೆ ಇಳಿದಿರುವುದು ಜನರಲ್ಲಿ ಭಯ ಉಂಟು ಮಾಡಿದೆ.

LEAVE A REPLY

Please enter your comment!
Please enter your name here