ಕುದ್ಮಾರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಲದಿಂದ ಆಟಿದ ಕೂಟ ಕಾರ್ಯಕ್ರಮ

0

ಕಾಣಿಯೂರು: ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಲದ ವತಿಯಿಂದ ಆಟಿದ ಕೂಟ ಕಾರ್ಯಕ್ರಮವು ಬರೆಪ್ಪಾಡಿ ದ್ವಾಕ್ರ ಕಟ್ಟಡದಲ್ಲಿ ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷೆ ಶುಭಾ ಆರ್ ನೋಂಡರವರು ಆಟಿ ತಿಂಗಳ ಮಹತ್ವದ ಬಗ್ಗೆ ತಿಳಿಸಿದರು. ಗೌರವಾಧ್ಯಕ್ಷೆ ರೇವತಿ ವಾಲ್ತಾಜೆ ಕುದ್ಮಾರುರವರು ಮಹಿಳೆಯಾರಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಆಟಿಯ ವಿಶೇಷ ಖಾದ್ಯಗಳನ್ನು ಮಹಿಳೆಯರು ಪ್ರದರ್ಶಿಸಿದರು. ಬೆಳಂದೂರು ಅಂಗನವಾಡಿ ಕಾರ್ಯಕರ್ತೆ ಕಮಲ ಪ್ರಾರ್ಥಿಸಿದರು. ಕಾರ್ಯದರ್ಶಿ ಉಮಾ ಗೌಡ ಪಳ್ಳತ್ತಾರು ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಉಮೇಶ್ವರಿ ಅಗಳಿ ವಂದಿಸಿದರು. ಸದಸ್ಯೆ ಯಶೋದಾ ಕೆಲಂಬಿರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here