ನೆಲ್ಯಾಡಿ ವರ್ತಕ ಸಂಘದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ನೆಲ್ಯಾಡಿ ವರ್ತಕರ ಸಂಘದ ವತಿಯಿಂದ ನೆಲ್ಯಾಡಿ ಡಿಯೋನ್ ಸ್ಕ್ವೇರ್ ಮುಂಭಾಗ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ.ಧ್ವಜಾರೋಹಣ ನೆರವೇರಿಸಿದರು. ಮಂಗಳೂರು ವಿವಿ ನೆಲ್ಯಾಡಿ ಘಟಕ ಕಾಲೇಜು ಉಪನ್ಯಾಸಕ ಡಾ| ನೂರುಂದಪ್ಪ ಅವರು ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡಿದರು. ನಿವೃತ್ತ ಯೋಧರಾದ ಒ.ಜಿ.ನೈನಾನ್ ನೆಲ್ಯಾಡಿ ಹಾಗೂ ಕೇಶವ ಹೆಚ್.ಮಾದೇರಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್.ದುರ್ಗಾಶ್ರೀ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಸಿ.ಹೆಚ್., ಗೌರವಾಧ್ಯಕ್ಷ ರಫೀಕ್ ಸೀಗಲ್, ಉಪಾಧ್ಯಕ್ಷ ನಾಝೀಂ ಸಾಹೇಬ್, ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ., ನೆಲ್ಯಾಡಿ ಗ್ರಾ.ಪಂ.ಸದಸ್ಯ ಅಬ್ದುಲ್ ಜಬ್ಬಾರ್, ವರ್ತಕರಾದ ರವಿಪ್ರಸಾದ್ ಆಚಾರ್ಯ, ಎನ್.ಎಸ್.ಸುಲೈಮಾನ್, ಎಂ.ಎಸ್.ಟೋಮ್, ರವಿ ಸುರಕ್ಷಾ, ಸಿದ್ದೀಕ್ ಜಮಾಲಿಯಾ, ಅಬ್ದುಲ್ ರವೂಫ್ ಎಂ.ಆರ್., ದಿನೇಶ್ ಎಂ.ಟಿ., ರಾಜ ಜ್ಯೋತಿಕಾ ಫ್ಯಾನ್ಸಿ, ಅಬ್ದುಲ್ ಮುತಾಲಿಬ್ ಮತ್ತಿತರರು ಉಪಸ್ಥಿತರಿದ್ದರು. ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು. ಸಂಘದ ಉಪಾಧ್ಯಕ್ಷ ಗಣೇಶ್ ರಶ್ಮಿ ಸ್ವಾಗತಿಸಿ, ಅಬ್ದುಲ್ ಲತೀಫ್ ವಂದಿಸಿದರು.

LEAVE A REPLY

Please enter your comment!
Please enter your name here