ನೆಲ್ಯಾಡಿ: ಸಂತಜಾರ್ಜ್ ಪ.ಪೂ.ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಹಾಗೂ ಸಂತ ಜಾರ್ಜ್ ಪ.ಪೂ.ಕಾಲೇಜು ನೆಲ್ಯಾಡಿ ಇದರ ಸಹಯೋಗದೊಂದಿಗೆ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಆ.13ರಂದು ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನಲ್ಲಿ ನಡೆಯಿತು.


ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ.ಜೆ. ಉದ್ಘಾಟಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯಗುರು ತೋಮಸ್ ಎಂ.ಐ.ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯರವರು ಮಾತನಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಬಹಳ ಅಗತ್ಯವಾಗಿದೆ. ಹದಿಹರೆಯದ ವಯಸ್ಸಿನಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿರಬೇಕು ಎಂದರು. ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ. ಬಂಟ್ರಿಯಾಲ್, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ನಿರೂಪಿಸಿದರು. ಕೃಷಿ ಮೇಲ್ವಿಚಾರಕ ಸೋಮೇಶ್, ಸೇವಾ ಪ್ರತಿನಿಧಿಗಳಾದ ಮೋಹಿನಿ, ಹೇಮಾವತಿ, ನಮಿತಾ ಶೆಟ್ಟಿ, ವೇದಾ ಪಿ., ಸಹಕರಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here