ಕಾೖಮಣ: ಕೋರಿಕ್ಕಾರು ತೀರ ಹದಗೆಟ್ಟ ರಸ್ತೆ – ದುರಸ್ಥಿಗೊಳಿಸುವಂತೆ ಸ್ಥಳೀಯರ ಆಗ್ರಹ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಕಜಾಲು- ಮುಂಡಾಲ – ಕೋರಿಕ್ಕಾರ್ ಸಂಪರ್ಕ ರಸ್ತೆಯು ತೀರ ಹದಗೆಟ್ಟಿದ್ದು, ರಸ್ತೆಯನ್ನು
ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮುಂಡಾಳ, ಬರಮೇಲು, ಕೋರಿಕ್ಕಾರ್, ಮಾರ್ಕಜೆ ನಿವಾಸಿಗಳು ದೈನಂದಿನ ಪ್ರತಿ ಕೆಲಸ ಕಾರ್ಯಗಳಿಗೆ ಈ ರಸ್ತೆಯನ್ನು ಅವಲಂಬಿಸುತ್ತಿದ್ದು, ರಸ್ತೆಯ ಎರಡು ಬದಿಗಳಲ್ಲಿ ಮರಗಿಡಗಳು ಅವರಿಸಿದ್ದರಿಂದ ವಾಹನ ಸಂಚಾರಕ್ಕೆ ತುಂಬಾ ಅಡಚಣೆಯಾಗುತ್ತಿದೆ. ಅಲ್ಲದೇ ರಸ್ತೆಯ ಎರಡೂ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಕೋರಿಕ್ಕಾರ್ ಎಂಬಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿಯುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ರಸ್ತೆಯನ್ನು ದುರಸ್ಥಿಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸ್ಥಳೀಯರು ಬೆಳಂದೂರು ಗ್ರಾಮ ಪಂಚಾಯತ್ ಗೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here