ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ, ಆಕರ್ಷಕ ಪಥ ಸಂಚಲನ

0

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸರ್ವೆ ಕಲ್ಪಣೆ ಇಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ ಎಂ ಹನೀಫ್ ರೆಂಜಲಾಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವೆಲ್ಲರೂ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು, ಧರ್ಮ ಧರ್ಮಗಳ ಮಧ್ಯೆ ಮಾನವೀಯ ಧರ್ಮದ ಸಂದೇಶವನ್ನು ಸಾರಬೇಕು ಎಂದು ಹೇಳಿದರು.

ಮುಖ್ಯಗುರು ಕಮಲಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು.ಮಹಾಬಲ ರೈ, ಕರುಣಾಕರ ಗೌಡ ಎಲ್ಲಿಯ, ನಾಸಿರ್ ಫೈಝಿ ರೆಂಜಲಾಡಿ, ಮಜೀದ್ ಬಾಳಾಯ ಸಂದರ್ಭೋಚಿತವಾಗಿ ಮಾತನಾಡಿದರು.


ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಉಮಾವತಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಊರವರು ಭಾಗವಹಿಸಿದ್ದರು.
ಶಿಕ್ಷಕರಾದ ಸತೀಶ್, ಉಮಾವತಿ, ದೀಕ್ಷ, ಅವಿತ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು. ಶಿಕ್ಷಕಿ ಅನಿತಾ ವಂದಿಸಿದರು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

LEAVE A REPLY

Please enter your comment!
Please enter your name here