ಸಣ್ಣ ಕೈಗಾರಿಕಾ ಅಭಿವೃದ್ದಿ ಸಹಕಾರ ಸಂಘಕ್ಕೆ (ಸಿಡ್ಕೋ) ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ

0

ಪುತ್ತೂರು:ಸಣ್ಣ ಕೈಗಾರಿಕಾ ಅಭಿವೃದ್ದಿ ಸಹಕಾರ ಸಂಘಕ್ಕೆ (ಸಿಡ್ಕೋ) ಪ್ರಥಮ ಬಾರಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯನ್ನು ಆ.14ರಂದು ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ. ಜಯರಾಮ ರೈ ನೀಡಿ ಗೌರವಿಸಿದರು.

ಸಂಘದ ಅಧ್ಯಕ್ಷರಾದ ಟಿ. ವಿ. ರವೀಂದ್ರನ್ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಈಶ್ವರ ಭಟ್ ಮತ್ತು ನಿರ್ದೇಶಕಿ ಮೀನಾಕ್ಷಿ ಪ್ರಶಸ್ತಿ ಸ್ವೀಕರಿಸಿದರು. ನಿರ್ದೇಶಕರಾದ ರವಿರಾಜ್ ಭಟ್ ಮತ್ತು ಕೇಶವ ಬಿ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here