ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ- ಧಾರ್ಮಿಕ ಸಭೆ

0

ಪುಣಚ: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುಣಚ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿ ದೇವಿನಗರ ಇವರ ಸಹಭಾಗಿತ್ವದಲ್ಲಿ ನಡೆಯುವ 22ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯು ಆ.16ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.

ಬೆಳಿಗ್ಗೆ ವೇದಮೂರ್ತಿ ಸುಬ್ರಾಯ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ದೇವಿನಗರ ಶ್ರೀದೇವಿ ಮಹಿಳಾ ಭಜನಾ ಮಂಡಳಿ ಯವರಿಂದ ಭಜನೆ, ಬಳಿಕ ಪೂಜಾರಂಭಗೊಂಡಿತು.

ಧಾರ್ಮಿಕ ಸಭೆ: ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮಲ್ಲಿ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಶ್ರೀರಾಮ ಶಿಶು ಮಂದಿರದ ಅಭಿವೃದ್ಧಿ ಮಂಡಳಿ ಸದಸ್ಯೆ ಪಂಜಿಕಲ್ಲು ಶಾಂತಲಕ್ಷ್ಮಿ ಎಸ್.ರಾವ್ ಮಾತನಾಡಿ ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಿ, ಹಿಂದುತ್ವವನ್ನು ಬೆಳೆಸಬೇಕು. ಭಗವಂತನ ಸೇವೆಯೋ,ದೇಶ ಸೇವೆಯೊ ಮಾಡಿ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಿ ನಾವು ಧನ್ಯರಾಗಬೇಕು. ನಾವು ಆಚರಿಸುವ ಯಾವುದೇ ಹಬ್ಬಕ್ಕೆ ಅದರದೇ ಆದ ಮಹತ್ವವಿದೆ. ಶ್ರೇಷ್ಠವಾದ ವರವನ್ನು ಬೇಡಿ ಸಂಸ್ಕಾರಯುತ ಜೀವನ ಪಡೆಯಲು ಅನುಗ್ರಹ ಲಭಿಸಲಿ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು ಸಂದರ್ಭೋಚಿತವಾಗಿ ಮಾತನಾಡಿ ಶುಭ ನುಡಿದರು. ಶ್ರೀದೇವಿ ಮಹಿಳಾ ಮಂಡಳಿಯ ಅಧ್ಯಕ್ಷೆ ಯಮುನಾ ಅಜೇರುಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ: ಹಲವು ವರ್ಷಗಳಿಂದ ದೇವಸ್ಥಾನದಲ್ಲಿ ದಿನನಿತ್ಯ ಶುಚಿತ್ವ ಹಾಗೂ ಇತರೆ ಕೆಲಸಗಳನ್ನು ನಿರ್ವಹಿಸುತ್ತಿರುವ ಜಯಂತಿ ಪುರುಷ ಹಾಗೂ ಮಲ್ಲಿಗೆ, ಸಿಹಿತಿಂಡಿ ತಯಾರಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಾಲತಿ ನೂಜಿ ರವರನ್ನು ಶಾಲು ಹೊದಿಸಿ,ದೀಪ ಸೀರೆ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಜಯಲಕ್ಷ್ಮಿ ಪ್ರಾರ್ಥಿಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ನಳಿನಿ ಚಂದ್ರಶೇಖರ್ ದಲ್ಕಾಜೆಗುತ್ತು ಸ್ವಾಗತಿಸಿ, ಕಾರ್ಯದರ್ಶಿ ಸುಮನಾ ರವೀಂದ್ರ ವಂದಿಸಿದರು. ಮುಖ್ಯ ಶಿಕ್ಷಕಿ ರಜನಿ ಸನ್ಮಾನಿತರ ಪರಿಚಯ ವಾದಿಸಿದರು. ಶಿಕ್ಷಕಿ ವೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಪೂಜಾ ಸಮಿತಿ ವತಿಯಿಂದ ಪ್ರಸಾದ ರೂಪದಲ್ಲಿ ಪ್ರಸಾದ,ಬಳೆ, ಕುಂಕುಮ ಮತ್ತು ನೂಲುಗಳನ್ನು ಭಕ್ತಾದಿಗಳಿಗೆ ವಿತರಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿ, ವರಮಹಾಲಕ್ಷ್ಮಿ ಪೂಜಾ ಸಮಿತಿ, ಶ್ರೀದೇವಿ ಮಹಿಳಾ ಮಂಡಳಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here