ಇಂದು ಎಜ್ಯುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್‌ನಿಂದ ವಿದ್ಯಾರ್ಥಿ ನೋಂದಣಿ ಆಪ್ ಬಿಡುಗಡೆ

0

ಪುತ್ತೂರು: ಎಜ್ಯುಕೇಶನಲ್ ಎಕ್ಸಲೆನ್ಸ್ ವಿದ್ಯಾರ್ಥಿ ನೋಂದಣಿ ಆಪ್‌ನ ಲೋಕಾರ್ಪಣೆ ಕಾರ್ಯಕ್ರಮ ಆ.17ರಂದು ಬೊಳುವಾರು ಮಹಾವೀರ ಆಸ್ಪತ್ರೆ ಬಳಿಯ ಮಹಾವೀರ ಕಟ್ಟಡದ 2ನೇ ಮಹಡಿಯಲ್ಲಿರುವ ಮಹಾವೀರ ಸಭಾಂಗಣದಲ್ಲಿ ಆ.17ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಪುತ್ತೂರು ಕಮ್ಯೂನಿಟಿ ಸೆಂಟರ್‌ನ ಮಾಜಿ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ನೇತೃತ್ವದ ಎಜ್ಯುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ಈ ಆಪ್‌ನ್ನು ಹೊರತರುತ್ತಿದ್ದು ಸಮುದಾಯದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ನನಸುಗೊಳಿಸುವಲ್ಲಿ ಇದು ಸಹಕಾರಿಯಾಗಲಿದೆ. ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ದ.ಕ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪುತ್ತೂರು ಮೌಂಟೆನ್ ವ್ಯೂ ವಿದ್ಯಾಲಯದ ಅಧ್ಯಕ್ಷ ಕೆ.ಪಿ ಅಹ್ಮದ್ ಹಾಜಿ, ಪ್ರೇರಣಾದಾಯಕ ಭಾಷಣಕಾರ ರಫೀಕ್ ಮಾಸ್ಟರ್ ಮಂಗಳೂರು, ದ.ಕ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸುವಂತೆ ಕಾರ್ಯಕ್ರಮದ ಆಯೋಜಕರಾದ ಎಜುಕೇಶನಲ್ ಎಕ್ಸಲೆನ್ಸ್ ಪೌಂಡೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here