ತಾಲೂಕು ಮಟ್ಟದ ಚೆಸ್ ಪಂದ್ಯಾಟ – ಪೆರ್ಲಂಪಾಡಿ ಶಾಲೆಯ ಸಾಕ್ಷಿ ಕೆ.ಆರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪೆರ್ಲಂಪಾಡಿ : ಹೊಸಮಜಲು ಸ.ಹಿ.ಪ್ರಾ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಪೆರ್ಲಂಪಾಡಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸಾಕ್ಷಿ ಕೆ.ಆರ್‌ಯವರು ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕೋಡಿಮಜಲು ರವಿಚಂದ್ರ ಕೆ ಮತ್ತು ದಿವ್ಯಾರವರ ಪುತ್ರಿಯಾಗಿದ್ದು, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜೀವಿ ಬಿ.ಕೆ ಇವರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here