ಅಳಕೆಮಜಲು‌, ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ವರಮಹಾಲಕ್ಷ್ಮಿ ಪೂಜೆ

0

ವಿಟ್ಲ: ಅಳಕೆಮಜಲು‌, ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂಡಳಿ ಯಲ್ಲಿ ವೇದಮೂರ್ತಿ ಶ್ರೀಧರ ಭಟ್ ಕಬಕರವರ ಪೌರೋಹಿತ್ಯದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತುರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮಾಣಿ ವಲಯ ಮೇಲ್ವಿಚಾರಕಿ ಆಶಾಪಾರ್ವತಿ ಧಾರ್ಮಿಕ ಉಪಸ್ಯಾಸ ನೀಡಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷ ಜಗದೀಶ ಪೂಜಾರಿ, ಮಹಿಳಾ ಸಮಿತಿ ಅಧ್ಯಕ್ಷೆ ಗೀತಾ ಶಿವಪ್ಪ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಮಾ ಜಗದೀಶ ಪ್ರಾರ್ಥಿಸಿ, ಆಶಾ ಮೋನಪ್ಪ ನಾಯ್ಕ್ ಸ್ವಾಗತಿಸಿ, ಸುಗಂಧಿನಿ ಕಾರ್ಯಕ್ರಮ ನಿರೂಪಿಸಿ, ರತ್ನಾವತಿ ವಂದಿಸಿದರು.

LEAVE A REPLY

Please enter your comment!
Please enter your name here