ಪುತ್ತೂರು ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿಗೆ ಪದಾಧಿಕಾರಿಗಳ ನೇಮಕ

0

ಪುತ್ತೂರು: ಅನ್ಸಾರುದ್ದೀನ್ ಜಮಾತ್ ಕಮಿಟಿ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ದರ್ಬೆ ಮಹಮ್ಮದೀಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ ರಹೀಮಾನ್ ಆಜಾದ್ ದರ್ಬೆರವರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಇಬ್ರಾಹಿಂ ಗೋಳಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ ಖಜಾಂಜಿಯಾಗಿ ಹಸ್ಸನ್ ಹಸನ್ ಹಾಜಿ ಸಿಟಿ ಬಜಾರ್ ರವರು ಆಯ್ಕೆಗೊಂಡಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಎಲ್. ಟಿ. ಅಬ್ದುಲ್ ರಜಾಕ್ ಹಾಜಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ವಿ.ಕೆ. ಶರೀಫ್ ಬಪ್ಪಳಿಗೆ, ಶಕೀಲ್ ಕೂರ್ನಡ್ಕ, ಅಬ್ಬಾಸ್ ಬಪ್ಪಳಿಗೆರವರನ್ನು ಆಯ್ಕೆ ಮಾಡಲಾಯಿತು.

ದ.ಕ. ಜಿಲ್ಲಾ ವಕ್ಫ್ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆಯನ್ನು ನಡೆಸಲಾಯಿತು. ದ ಕ ಜಿಲ್ಲಾ ವಕ್ಫ್ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿ ಸ್ಟಾರ್ ಹಾಗೂ ದ.ಕ.ಜಿಲ್ಲಾ ವಕಫ್ ಅಧಿಕಾರಿ ಅಬೂಬಕ್ಕರ್ ರವರ ನೇತೃತ್ವದಲ್ಲಿ ಈ ಆಯ್ಕೆಯನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here