ಆರ್ಲಪದವು: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ- ಕಥಾ ಪ್ರವಚನ

0

ನಿಡ್ಪಳ್ಳಿ: ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿ ಆರ್ಲಪದವು, ಪಾಣಾಜೆ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ಕಥಾ ಪ್ರವಚನವು ಆ.16ರಂದು ಶ್ರೀ ದುರ್ಗಾ ಸಭಾಭವನ ಆರ್ಲಪದವು ಇಲ್ಲಿ ನಡೆಯಿತು. ಬೆಳಗ್ಗೆ ಕಾರ್ತಿಕೇಯ ಭಜನಾ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆದು ಬಳಿಕ ವೇದಮೂರ್ತಿ ಶ್ರೀ ಕೃಷ್ಣ ಭಟ್ ಬಟ್ಯಮೂಲೆ  ಇವರ ಪೌರೋಹಿತ್ಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಆರಂಭವಾಗಿ ಮಧ್ಯಾಹ್ನ ಮಹಾಪೂಜೆ ನಂತರ ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. 

ಈ ಸಂದರ್ಭದಲ್ಲಿ ಭಕ್ತಾದಿಗಳು, ಗಣ್ಯ ವ್ಯಕ್ತಿಗಳು, ಊರ ಹಿರಿಯರು, ಊರಿನ‌ ಹಲವು ಸಂಸ್ಥೆಯ ಪದಾಧಿಕಾರಿಗಳು ಹಾಗೂ ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಮತ್ತು ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here