ಕಾವು: ಬೈಕ್, ಪಿಕಪ್ ಡಿಕ್ಕಿ – ಅಮ್ಚಿನಡ್ಕದ ಕ್ಷೌರಿಕ ಮೃತ್ಯು

0

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾವು ಸಮೀಪ ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಅಮ್ಚಿನಡ್ಕದ ಕ್ಷೌರಿಕರೊಬ್ಬರು ಮೃತಪಟ್ಟ ಘಟನೆ ಆ.18ರಂದು ಬೆಳಗ್ಗೆ ನಡೆದಿದೆ.
ಅಮ್ಚಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡ್ನೂರು ಗ್ರಾಮದ ಕಾವು ಬಜಕುಡೇಲು ದಿ. ರಾಮ ಭಂಡಾರಿ ಎಂಬವರ ಪುತ್ರ ಅವಿವಾಹಿತ ಸುರೇಶ್ ಭಂಡಾರಿ(45 ವ)ರವರು ಮೃತಪಟ್ಟವರು. ಅವರು ಬೆಳಗ್ಗೆ ಬೈಕ್‌ನಲ್ಲಿ ಅಮ್ಚಿನಡ್ಕದ ಸೆಲೂನ್ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾವಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬರುತಿದ್ದ ಪಿಕಪ್ ನಡುವೆ ಅಪಾಘತ ಸಂಭವಿಸಿದೆ.

LEAVE A REPLY

Please enter your comment!
Please enter your name here