ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿದ್ಯಾಮಾತಾ ಅಕಾಡೆಮಿಯಲ್ಲಿ ಕೃಷ್ಣ ವೇಷ ಸ್ಪರ್ಧೆ

0

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ ಮತ್ತು ನಂದಗೋಕುಲ ಚಿಣ್ಣರ ಅಂಗಳ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ದಿನಾಂಕ 25.8.2024 ರಂದು ಭಾನುವಾರ ಗಂಟೆ 10 ರಿಂದ ಕೃಷ್ಣವೇಷ ಸ್ಪರ್ಧೆ ನಡೆಯಲಿರುವುದು.

ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು, ಆರು ತಿಂಗಳಿಂದ ಎರಡುವರೆ ವರ್ಷದೊಳಗಿನ ಮಕ್ಕಳು ಮತ್ತು ಎರಡುವರೆ ವರ್ಷದಿಂದ ಐದು ವರ್ಷದೊಳಗಿನ ಮಕ್ಕಳಿಗಾಗಿ ಸ್ಪರ್ಧೆ ನಡೆಯಲಿದೆ. ಪ್ರಥಮ ಬಹುಮಾನ 3000ರೂಪಾಯಿ, ದ್ವಿತೀಯ ಬಹುಮಾನ 2000 ರೂಪಾಯಿ, ತೃತೀಯ ಬಹುಮಾನ ಒಂದು ಸಾವಿರ ರೂಪಾಯಿ ಹಾಗೂ ಭಾಗವಹಿಸುವ ಎಲ್ಲಾ ಮುದ್ದು ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ನೀಡಲಾಗುವುದು. ಎರಡು ವಿಭಾಗಗಳಿಗೂ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಗೆ ಬರುವಾಗ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಒಂದು ಭಾವಚಿತ್ರ ತರತಕ್ಕದ್ದು ಹೆಸರು ನೋಂದಾಯಿಸಲು ಕೊನೆಯ ದಿನಾಂಕ 21.08.2024 ವಿವರಗಳಿಗಾಗಿ ಹಾಗೂ ನೋಂದಾಯಿಸಲು ಕರೆ ಮಾಡಿ
8105556656 / 8590773486

LEAVE A REPLY

Please enter your comment!
Please enter your name here