ಜಿಲ್ಲಾಮಟ್ಟದ ಚೆಸ್ ಪಂದ್ಯಾಟ – ವಿವೇಕಾನಂದ ಪ.ಪೂ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ

0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಬಾಸ್ಕೊ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ ನಡೆದ  ಜಿಲ್ಲಾಮಟ್ಟದ ಚೆಸ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ.

ಪ್ರಥಮ ಸ್ಥಾನವನ್ನು ಪಡೆದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್‌ ರಾಮ್‌ ಹಾಗೂ ಐದನೇ ಸ್ಥಾನವನ್ನು ಪಡೆದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಂದ್ಯಾ ಪ್ರಭು. ಜಿ ರಾಜ್ಯ ಮಟ್ಟದ ಚೆಸ್‌ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕರ ತಂಡದಲ್ಲಿ ದ್ವಿತೀಯ ಪಿಯುಸಿಯ ಧನುಷ್‌ ರಾಮ್‌, ಪ್ರದಾನ್‌, ಎಮ್ ಸ್ಕಂದ ಕುಮಾರ್‌, ಲಿಖಿತ್‌, ಶ್ರೀನಿಧಿ ಎಸ್‌ ಹಾಗೂ  ಪ್ರಥಮ ಪಿಯುಸಿಯ ಸಂಪ್ರೀತ್‌ ಕೆ.ಭಟ್‌ ಭಾಗವಹಿಸಿದ್ದರು. ಬಾಲಕಿಯರ ತಂಡದಲ್ಲಿ  ವಂಧ್ಯಾ ಪ್ರಭು ಜಿ, ವಿದ್ಯಾಲಕ್ಷ್ಮಿ ಎಸ್ ಜಿ, ಪೂರ್ವಿ ಬಿ.ಆರ್‌, ಬಿಂದು ಕೆ.ಜೆ  ಹಾಗೂ ಮಾನ್ಯ ವೈ.ಪಿ ಇವರು ಭಾಗಿಯಾಗಿದ್ದರು.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು  ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here