ಕರ್ಕುಂಜ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 2ನೇ ಬಾರಿಗೆ ಸಾಧನಾ ಪ್ರಶಸ್ತಿ

0

ಪುತ್ತೂರು: ಕರ್ಕುoಜ ಹಾಲು ಉತ್ಪಾದಕಾರ ಮಹಿಳಾ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 2ನೇ ಬಾರಿಗೆ ಸಾಧನಾ ಪ್ರಶಸ್ತಿ ಪಡೆದಿದೆ.
ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿದ ಸಾಧನೆಗೆ ಈ ಪ್ರಶಸ್ತಿ ಲಭಿಸಿದ್ದು ಆ. 14ರಂದು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಶಶಿಕುಮಾರ್ ಈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ ಬಳೆಜ್ಜ ಪ್ರಶಸ್ತಿ ನೀಡಿ ಗೌರವಿಸಿದರು. ಕರ್ಕುಂಜ ಹಾಲು ಉತ್ಪಾದಕಾರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸರೋಜಿನಿ ಕೆ ಎಸ್., ಕಾರ್ಯದರ್ಶಿ ಕೆ. ನಳಿನಾಕ್ಷಿ, ಹಾಲು ಪರೀಕ್ಷಕಿ ಕೆ. ನಳಿನಿ, ನಿರ್ದೇಶಕರಾದ ಜಯoತಿ ಎಸ್. ಪ್ರಶಸ್ತಿ ಸ್ವಿಕರಿಸಿದರು.

LEAVE A REPLY

Please enter your comment!
Please enter your name here