ಚೆಸ್ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿಯ ಸಾನ್ವಿಕ ಎಚ್ ರಾಜ್ಯಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಎಸ್ ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ
ಪ್ರಾಥಮಿಕ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿಕ ಎಚ್ ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ವೀಣಲತಾ ದಂಪತಿಗಳ ಪುತ್ರಿ. ಇವರಿಗೆ ನಮ್ಮ ಸಂಸ್ಥೆಯ ಟ್ರಸ್ಟಿ ಹರಿಚರಣ್ ರೈ ಮಾದೋಡಿಯವರು ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಶಿಕ್ಷಕಿ ಮೇಘನಾ ಸಹಕರಿಸಿದರು. ಇವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವಿಶ್ ಮುರುಳ್ಯ, ಮುಖ್ಯಗುರುಗಳು ಮತ್ತು ಎಲ್ಲಾ ಶಿಕ್ಷಕವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here