ಶಟಲ್ ಪಂದ್ಯಾಟ- ಸುದಾನ ಶಾಲೆಯ ಭಗತ್ ಕೃಷ್ಣ ಜಿಲ್ಲಾಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯು ಪುತ್ತೂರಿನ ಆಫೀಸರ‍್ಸ್ ಕ್ಲಬ್ ನಲ್ಲಿ ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರಿನ ಸುದಾನ ವಸತಿ ಶಾಲೆಯ ವಿದ್ಯಾರ್ಥಿ ಭಗತ್ ಕೃಷ್ಣ ರವರು ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಪಂದ್ಯಾಟದ ಪ್ರಾಥಮಿಕ ಬಾಲಕಿಯರ ಮತ್ತು ಪ್ರೌಢ ಬಾಲಕಿಯರ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿನಿಯರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಇವರುಗಳಿಗೆ ವರುಣ್, ಶ್ರೀ ಪಾಪನ್ ಮತ್ತು ದೈಹಿಕ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ. ವಿಜೇತರನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here