ಕೌಡಿಚ್ಚಾರು:  ಕಾಡು ಹಂದಿ ದಾಳಿ – ಕುಂಬ್ರ ಪೆಟ್ರೋಲ್ ಪಂಪ್ ನೌಕರನಿಗೆ ತೀವ್ರ ಗಾಯ

0

ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ  ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಆಗಿರುವ ಧನುಷ್  ಎಂಬವರು ತೀವ್ರ ಗಾಯಗೊಂಡ ಘಟನೆ ಆ.20 ರ ಬೆಳಗ್ಗಿನ ಜಾವ ನಡೆದಿದೆ.

ಧನುಷ್ ಅವರು ಎಂದಿನಂತೆ ಬೆಳಿಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ ಏಕಾ ಏಕಿ ಕಾಡು ಹಂದಿಯೊಂದು ಧನುಷ್ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೇಳಗೆ ಬಿದ್ದ ಧನುಷ್ ಅವರ ಮೇಲೆ ಎರಗಿ ಅವರ ಬಲ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದಲ್ಲದೆ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು 108 ಆ್ಯಂಬುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ  ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here