ಚದುರಂಗ ಸ್ಪರ್ಧೆ-ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಉಪ್ಪಿನಂಗಡಿ ಸರಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯ ವಿದ್ಯಾರ್ಥಿಗಳು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


17 ವರ್ಷ ವಯೋಮಾನದ ವಿಭಾಗದಲ್ಲಿ ರೇಷ್ಮಾ(9ನೇ ತರಗತಿ) ಪ್ರಥಮ ಸ್ಥಾನ, ಧನುಷಾ(9ನೇ ತರಗತಿ) ಪಂಚಮ ಸ್ಥಾನ ಹಾಗೂ 14ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಅನುಪ್ ಮಧು (೮ನೇ ತರಗತಿ) ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಸಾಧಕ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಸಂಚಾಲಕರಾದ ರೆ.ಫಾ. ನೋಮಿಸ್ ಕುರಿಯಾಕೋಸ್ ಹಾಗೂ ಮುಖ್ಯಗುರುಗಳು ಮತ್ತು ಶಿಕ್ಷಕರು ಅಭಿನಂದಿಸಿದರು.

LEAVE A REPLY

Please enter your comment!
Please enter your name here