ಚಾರ್ವಾಕ ಶಾಲೆಗೆ ಶಿಕ್ಷಕರನ್ನು ಒದಗಿಸಿ – ಎಸ್. ಡಿ.ಎಂ.ಸಿ ನೇತೃತ್ವದಲ್ಲಿ ಶಿಕ್ಷಣಾಧಿಕಾರಿಗಳಿಗೆ ಮನವಿ

0

ಕಾಣಿಯೂರು: ಕಡಬ ತಾಲೂಕು ಚಾರ್ವಾಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು, ತಕ್ಷಣ ಶಿಕ್ಷಕರನ್ನು ಒದಗಿಸುವಂತೆ ಶಾಲಾ ಎಸ್ ಡಿಎಂ ಸಿ ನೇತೃತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಶಾಲಾ ಶಿಕ್ಷಕರ ಕೊರತೆ ಮತ್ತು ಶಾಲೆಯ ಇನ್ನಿತರ ಸಮಸ್ಯೆಗಳ ಬಗ್ಗೆಯೂ ಮನವಿಯಲ್ಲಿ ತಿಳಿಸಿದ್ದಾರೆ.


ಎಸ್. ಡಿ ಎಂ. ಸಿ ಅಧ್ಯಕ್ಷ ಲೋಕೇಶ್ ಎಣ್ಮೂರು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ,ಗ್ರಾ.ಪಂ ಸದಸ್ಯ ಗಣೇಶ್ ಉದನಡ್ಕ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸಾರಿಕ ದೇವರತ್ತಿಮಾರು, ಗ್ರಾ. ಪಂ ಸದಸ್ಯೆ ಮೀರಾ ಕಳಂಜೋಡಿ, ಎಸ್ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷರುಗಳಾದ ರಾಮಣ್ಣ ಗೌಡ ಪೊನ್ನೆತ್ತಡಿ, ಗೋಪಾಲಕೃಷ್ಣ ಬಾರೆಂಗಳ
ಹಾಗೂ ಎಸ್. ಡಿ. ಎಂ .ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here