ಉಪ್ಪಿನಂಗಡಿ:ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದ ವ್ಯಕ್ತಿ ಸಾವು

0

ಉಪ್ಪಿನಂಗಡಿ: ನಾಲ್ಕು ದಿನದ ಹಿಂದೆ ವಿಪರೀತ ಮದ್ಯ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ನಿವಾಸಿ ಕೃಷ್ಣಪ್ಪ ಗೌಡ(50ವ.)ಎಂಬವರು ಆ.20ರಂದು ಮೃತಪಟ್ಟಿದ್ದಾರೆ.


ಕೃಷ್ಣಪ್ಪ ಗೌಡ ಅವರು 20 ವರ್ಷದ ಹಿಂದೆ ಮನೆ ಬಿಟ್ಟು ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು ಸಿಕ್ಕ ಸಿಕ್ಕಲ್ಲಿ ಮಲಗಿಕೊಂಡಿದ್ದರು. ವಿಪರೀತ ಅಮಲು ಪದಾರ್ಥ ಸೇವನೆ ಮಾಡಿ ಸರಿಯಾಗಿ ಆಹಾರ ಸೇವನೆ ಮಾಡುತ್ತಿರಲಿಲ್ಲ. ಆ.18ರಂದು ಉಪ್ಪಿನಂಗಡಿ ಪೇಟೆಯಲ್ಲಿ ಬಿದ್ದಿದ್ದವರನ್ನು ಲಾರೆನ್ಸ್ ವೇಗಸ್ ಎಂಬವರು ಆಂಬುಲೆನ್ಸ್‌ನಲ್ಲಿ ಕರೆತಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ಅಲ್ಲಿಂದ ಆ.19ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದವರು ಆ.20ರಂದು ಮಧ್ಯಾಹ್ನ 3.30 ಗಂಟೆಯ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಸಹೋದರ ವಾಸು ಗೌಡ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here