ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟವು ವಿವೇಕಾನಂದ ಪ.ಪೂ. ಕಾಲೇಜು ಪುತ್ತೂರು ಇಲ್ಲಿ ಆಗಸ್ಟ್ 21ರಂದು ನಡೆಯಿತು.

ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣ ವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಆಶಾ,ಸಮೀಕ್ಷಾ,ಹರ್ಷಿತಾ, ದ್ವಿತೀಯ ವಿಜ್ಞಾನ ವಿಭಾಗದ ತನ್ಮಯಿ ಬಿ. ಸುವರ್ಣ,ಮೋಕ್ಷಿತಾ,ತೃಷಾ, ಪ್ರಥಮ ವಾಣಿಜ್ಯ ವಿಭಾಗದ ಸಿಂಚನಾ ಎಸ್. ಎಮ್.,ಕೃತಿ ಎಚ್.,ಶೀಲಾ ಎಸ್., ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ ಇವರು ಖೋ-ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here