ಅಳಿಕೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ವಿಟ್ಲ: ಅಳಿಕೆ ವಲಯ ಸಾಮೂಹಿಕ ಶ್ರೀ ಪೂಜಾ ಸಮಿತಿ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಳಿಕೆ ವಲಯ, ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಜನಜಾಗೃತಿ ವೇದಿಕೆ ಅಳಿಕೆ ವಲಯದ ಆಶ್ರಯದಲ್ಲಿ ಮಡಿಯಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಭಟ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ವಹಿಸಿದ್ದರು. ಗಣೇಶ್ ಮಯ್ಯ ಮಡಿಯಾಲ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಶಾಸಕರಾದ ಅಶೋಕ್ ಕುಮಾರ್ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದ.ಕ. 2 ಜಿಲ್ಲೆ ನಿರ್ದೇಶಕ ಪ್ರವೀಣ್ ಕುಮಾರ್, ಮಾಣಿಲ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಲತಾ ಯು., ಜನಜಾಗೃತಿ ವೇದಿಕೆ ಅಳಿಕೆ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ, ಬಿ.ಸಿ. ಟ್ರಸ್ಟ್ ವಲಯಾಧ್ಯಕ್ಷ ರಾಜೇಂದ್ರ ರೈ ಉಪಸ್ಥಿತರಿದ್ದರು.

ಪ್ರವೀಣ್ ಸಣ್ಣಗುತ್ತು ಸ್ವಾಗತಿಸಿದರು. ಸದಾಶಿವ ಶೆಟ್ಟಿ ಮಡಿಯಾಲ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here