ಪೆರ್ನೆ: ಬಸ್ಸಿನಿಂದ ಬಿದ್ದು ಮಹಿಳೆಗೆ ಗಾಯ

0

ಉಪ್ಪಿನಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಆ.21ರಂದು ಬೆಳಿಗ್ಗೆ ಪೆರ್ನೆಯಲ್ಲಿ ನಡೆದಿದೆ.
ಗೀತಾ(60 ವ.)ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಮಾಣಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು (ಕೆಎ 57, ಎಫ್1297)ನಲ್ಲಿ ಪ್ರಯಾಣಿಸುತ್ತಿದ್ದವರು ಪೆರ್ನೆಯಲ್ಲಿ ಬಸ್ಸಿನ ಮುಂದಿನ ಬಾಗಿಲಿನ ಮೂಲಕ ರಸ್ತೆಗೆ ಬಿದ್ದು ಗಾಯಗೊಂಡಿರುವುದಾಗಿ ವರದಿಯಾಗಿದೆ. ಮಹಿಳೆಯನ್ನು ಸ್ಥಳೀಯರು ಉಪಚರಿಸಿ, ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಬಗ್ಗೆ ಪೆರ್ನೆ ನಿವಾಸಿ ಅಶ್ರಫ್ ಎಂಬವರು ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here